ಸೀಸನ್ 2 ಎಪಿಸೋಡ್ 4ದೇವರ ಮಕ್ಕಳ ಆತ್ಮ, ಪ್ರಾಣ ಮತ್ತು ದೇಹ ಆತ್ಮಆತ್ಮದೇಹದ ಬಗ್ಗೆ ಯಾಕೆ ಅಧ್ಯಯನ ಮಾಡಬೇಕು? ಇಬ್ರಿಯರಿಗೆ 5 :11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.12 ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.13 ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.14 ಆದರೆ ಗಟ್ಟಿಯಾದ ಆಹಾರವು, ತಮ್ಮ …
ಸೀಸನ್ 2 ಎಪಿಸೋಡ್ 4
ದೇವರ ಮಕ್ಕಳ ಆತ್ಮ, ಪ್ರಾಣ ಮತ್ತು ದೇಹ
ಆತ್ಮಆತ್ಮದೇಹದ ಬಗ್ಗೆ ಯಾಕೆ ಅಧ್ಯಯನ ಮಾಡಬೇಕು?
ಇಬ್ರಿಯರಿಗೆ 5 :11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
12 ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13 ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.
14 ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.
ಇಬ್ರಿಯರಿಗೆ 6 :1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ
2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.
3 ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.
ಇಬ್ರಿಯರಿಗೆ 6:1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ
2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.
3 ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.
ಎಫೆಸದವರಿಗೆ 1 :11 ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.
12 ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.
13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.
14 ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.
ಮತ್ತೆ ಹುಟ್ಟಿದ ಸೃಷ್ಟಿ
2 ಕೊರಿಂಥದವರಿಗೆ 5:16 ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.
17 ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ನಾವು ಒಂದು ಆತ್ಮ,ಒಂದು ಆತ್ಮವಿರುವ, ದೇಹದಲ್ಲಿ ಜೀವಿಸುವ ಆತ್ಮ
ಇಬ್ರಿಯರಿಗೆ 4:12 ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
1 ತಿಮೊಥೆಯನಿಗೆ 5:23 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.
ನೀವು (ಆತ್ಮ) – ನಿಮ್ಮ ದೇಹ – ನಿಮ್ಮ ಮನಸ್ಸು:
ರೋಮಾಪುರದವರಿಗೆ 12:1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ದೇವರು (ಹೆಬ್ರಿ – ಬಾರಾ) ಪುರುಷನು ಮತ್ತು ಮಹಿಳೆಯನ್ನು ಆತ್ಮವೆಂದು ಸೃಷ್ಟಿಸಿ, ಮಣ್ಣಿನಿಂದ ಅವರನ್ನು ರೂಪಿಸಿದ್ದರು:
ಸೃಷ್ಟಿ
ಆದಿಕಾಂಡ 1:26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.
27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ಆದಿಕಾಂಡ 2:3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
ಆದಿಕಾಂಡ 5:1 ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.
ಜೆಕರ್ಯ 12:1 ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ.
ಆದಿಕಾಂಡ 6:3 ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.
ಯೋಬ 33:4 ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.
ನಿರ್ಮಾಣ: – ತಾಯಿಯ ಗರ್ಭದಲ್ಲಿ
ಯೆರೆಮೀಯ 1:5 “ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ
ಮುಂಚೆಯೇ ನಿನ್ನನ್ನು ತಿಳಿದಿದ್ದನು ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”
ಆದಿಕಾಂಡ 2:7 ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
ಕೀರ್ತನೆಗಳು 139:15 ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ,
ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
ಯೆಶಾಯ 49: 5 ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.
ಎಫೆಸದವರಿಗೆ 1:4 ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನ ರ್ದೋಷಿಗಳೂೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.
ಯೆಶಾಯ 44:2 ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು,
ನಿ ನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.
ಯೋಬ 31:15 ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?
ಯೆಶಾಯ 49:1 ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.
ನಮ್ಮ ದೇಹ (ಸೋಮ) – ಮಣ್ಣಿನ ಪಾತ್ರ – ಆತ್ಮದ ವಾಸಸ್ಥಾನ
2 ಕೊರಿಂಥದವರಿಗೆ 4:7 ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.
1 ಥೆಸಲೋನಿಕದವರಿಗೆ 4:4 ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
ನಿಮ್ಮ ದೇಹವು ಪವಿತ್ರ ಆತ್ಮನ ದೇವಾಲಯವಾಗಿದೆ:
1 ಕೊರಿಂಥದವರಿಗೆ 6:19 ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.
20 ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.
ಮತ್ತಾಯ 12:43 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
44 ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
45 ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
ಲೂಕ 11:24 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,
25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
26 ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.
ಮತ್ತಾಯ 12:28 ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
ಲೂಕ 11:20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
21 “ಆಯುಧಗಳನ್ನು ಧರಿಸಿಕೊಂಡು, ಬಲಿಷ್ಠನಾದವನೊಬ್ಬನು ತನ್ನ ಮನೆಯನ್ನು ಕಾಯುವುದಾದರೆ ಅವನ ಸೊತ್ತು ಸುರಕ್ಷಿತವಾಗಿರುವುದು.
22 ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು.
ನಮ್ಮ ಆತ್ಮ: ಹೃದಯ, ಮನಸ್ಸಿನಂತೆ ಕೂಡ ಉಲ್ಲೇಖಿಸಲಾಗಿದೆ.
ಒಳಗೊಂಡವು: 1. ಬುದ್ಧಿಮತ್ತು (ತಾರ್ಕಿಕ ಮನಸ್ಸು), ಜಾಗೃತ ಮನಸ್ಸು, ಅಡಿಯಲ್ಲಿ ಸಂಕಲ್ಪಿತ ಮನಸ್ಸು, ಭಾವನೆಗಳು,
2. ಭಾವನೆಗಳು (ಅನುಭವಗಳು, ಆಸಕ್ತಿಗಳು),
3. ಮಾನವ ಇಚ್ಛಾಶಕ್ತಿ (ಇಚ್ಛಾಶಕ್ತಿ)
ರೋಮಾಪುರದವರಿಗೆ 12:2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಕೀರ್ತನೆಗಳು 51:10 ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ಕೀರ್ತನೆಗಳು 73: 26 ನನ್ನ ತನುಮನಗಳು ಕುಂದುತ್ತವೆ;
ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ,
ನನ್ನ ಪಾಲೂ ಆಗಿದ್ದಾರೆ.
ಯೋಹಾನ 14:27 ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
ಆತ್ಮನೊಂದಿಗೆ ಜೀವನ
ಎಫೆಸದವರಿಗೆ 2: 2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.
3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.
4 ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.
5 ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.
6 ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ.
7 ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾ ರೆ.
8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.
9 ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.
ಯೋಹಾನ 3:3 ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”
1 ಯೋಹಾನನು 4:13 ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
1 ಕೊರಿಂಥದವರಿಗೆ 6: 17 ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.
ಯೋಹಾನ 7: 37 ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.
38 ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.
39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.
ದೇವರ ರಾಜ್ಯದಲ್ಲಿ ದೊಡ್ಡದ್ದಾದವರೂ, ಅತ್ಯದ್ಧವಾಗಿರುವವರೂ
ಲೂಕ 1:13 ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.
14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,
15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.
16 ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.
17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.
ಮತ್ತಾಯ 11:11ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.
12 ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.
13 ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.
14 ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.
15 ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
ಶಿಷ್ಯರ ಹೃದಯದಲ್ಲಿ ಅಂತರಂಗ ಅಗ್ನಿಯಾದಂತೆ ಹೊತ್ತದೆ:
13 ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.
14 ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.
15 ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;
16 ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.
17 ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು.
ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.
18 ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.
19 ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು,
ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.
20 ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.
21 ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.
22 ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.
23 ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.
24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು.
25 ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!
26 ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,
27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.
28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.
29 ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.
30 ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.
31 ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.
32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.
ಕೀರ್ತನೆಗಳು 16:5 ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.
6 ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು.
7 ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು;
ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ.
8 ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ.
ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.
ಲೂಕ 24:45 ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು
ಅಪೊಸ್ತಲರ ಕೃತ್ಯಗಳು 16:14 ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.
ಕೀರ್ತನೆಗಳು 119: 8 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ
ನನ್ನ ಕಣ್ಣುಗಳನ್ನು ತೆರೆಯಿರಿ.
ಆತ್ಮದಲ್ಲಿ ಪ್ರಾರ್ಥನೆ ಮಾಡುವುದು:
ಮಾಂಸ ದುರ್ಣವಾಗಿದ್ದು, ಆತ್ಮ ಅತ್ಯಧಿಕವಾಗುತ್ತಿದೆ. ಆತ್ಮ ಸಿದ್ಧವಾಗಿದೆ
ಮತ್ತಾಯ 26:36 ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.
37 ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು.
38 ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.
39 ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.
40ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? 41ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
ಮಾರ್ಕ 14:32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.
33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,
34 “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.
35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,
36 “ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.
37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?
38 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
ಯೋಹಾನ 14:19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.
20 ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.
22 ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.
23 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.
24 ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.
2 ಕೊರಿಂಥದವರಿಗೆ 3:13 ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.
14 ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.
15 ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ.
16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.
17 ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”
18 ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.
1 ಕೊರಿಂಥದವರಿಗೆ 14:2 ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.
4 ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ.
5 ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.
14 ಏಕೆಂದರೆ ನಾನು ಅನ್ಯಭಾಷೆಗಳಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದು. ಆದರೆ ನನ್ನ ಬುದ್ಧಿ ನಿಷ್ಫಲವಾಗಿರುವುದು.
15 ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
16 ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ? 17ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.
18 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ.
ರೋಮಾಪುರದವರಿಗೆ 8:26 ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
ಪ್ರಾರ್ಥನೆಯಲ್ಲಿ ಆಧ್ಯಾತ್ಮಿಕ ಶಕ್ತಿ
ಎಫೆಸದವರಿಗೆ 3:14-15 ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:
16 ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.
17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು
18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ.
19 ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.
20 ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ
21 ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.
ಮತ್ತಾಯ 4:1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
2 ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
3 ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.
4 ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು
ಗಲಾತ್ಯದವರಿಗೆ 5:16 ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
17 ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.
22 ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,
23 ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
24 ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
25ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.
ಮತ್ತೆ ಜನಿಸಿದವರು – ನಿಮ್ಮ ದೇಹವೋ ಅಥವಾ ಆತ್ಮವೋ?
ಯೋಹಾನ 1:12 ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
13 ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಯೋಹಾನ 3:5 ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
6 ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.
7‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
8 ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.
1 ಪೇತ್ರನು 1:22 ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
23 ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.
24 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.
25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
ರೋಮಾಪುರದವರಿಗೆ 10:8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
ರೋಮಾಪುರದವರಿಗೆ 8:10 ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.
11 ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.
1 ಕೊರಿಂಥದವರಿಗೆ 15:45 “ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.
ಗಲಾತ್ಯದವರಿಗೆ 4:4 ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.
5 ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.
6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.
7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.
ಅಪೊಸ್ತಲರ ಕೃತ್ಯಗಳು 16:17 ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.
ಫಿಲಿಪ್ಪಿಯವರಿಗೆ 1:19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.
ರೋಮಾಪುರದವರಿಗೆ 8:15 ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.
ಯೋಹಾನ 14:16 ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.
17 ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.
18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.
19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.
20 ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
ಪವಿತ್ರಾತ್ಮನ ಮೂಲಕ ಹೃದಯದಲ್ಲಿ ಪರಿವರ್ತನೆ
ಯೆಹೆಜ್ಕೇಲನು 36:26 ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
27 ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.
ಯೋಯೇಲ 2:28 “ಆಮೇಲೆ ನಾನು,ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.
ಯೋಹಾನ 6:41 “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
42 “ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.
43 ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.
44 ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
45 ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
46 ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.
47 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.
48 ನಾನೇ ಜೀವದ ರೊಟ್ಟಿ.
49 ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.
50 ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.
51 ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.
52 ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.
53 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
54 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
55 ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
56 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.
57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.
58 ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.
59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.
60 ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.
61 ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?
62 ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63 ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.
65 ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”
66 ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
1 ಕೊರಿಂಥದವರಿಗೆ 2:13 ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.
14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.
16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು,
ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.
ರೋಮಾಪುರದವರಿಗೆ 8:6
ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.
ನಮ್ಮ ನಿಯತಿ:
ಎಫೆಸದವರಿಗೆ 2:10 ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.
1 ಕೊರಿಂಥದವರಿಗೆ 2:6 ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.
7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.
8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.
9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು
ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”
10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.
11 ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.
12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.
13 ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.
14 ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.
16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.
ನಾವು ಮರಣದೃಷ್ಟಿಯಾದಾಗ, ನಮ್ಮ ಆತ್ಮಕ್ಕೆ, ಮನಸ್ಸಿಗೆ ಏನು ಸಂಭವಿಸುತ್ತದೆ?
ಆತ್ಮ:
ಪ್ರಸಂಗಿ 12:6 ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.
7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.
ಲೂಕ 23:46 ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
ಅಪೊಸ್ತಲರ ಕೃತ್ಯಗಳು 7:59 ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.
60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.
ಆತ್ಮ:
ಕೀರ್ತನೆಗಳು 16:9 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.
10 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ;ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.
11 ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.
ಅಪೊಸ್ತಲರ ಕೃತ್ಯಗಳು 2:25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ:“ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.
26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು;
ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.
27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.
28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’
ಕೀರ್ತನೆಗಳು 49:14 ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ.
ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.
15 ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.
ಕೀರ್ತನೆಗಳು 86:11ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ.
ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.
12 ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು. ನಿಮ್ಮ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆ.
13 ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.
ಕೀರ್ತನೆಗಳು 9:17 ದುಷ್ಟರು ಪಾತಾಳಕ್ಕೆ ತಿರುಗುವರು,
ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.
ಕೀರ್ತನೆಗಳು 30:2 ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ. 3ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.
ಕೀರ್ತನೆಗಳು 56:11 ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?
12 ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.
13 ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.
ಪುನರುತ್ಥಾನದ ಸಂದರ್ಭದಲ್ಲಿ ದೇಹ:
1 ಕೊರಿಂಥದವರಿಗೆ 15:42 ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.
43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.
44 ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.
45 “ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.
46 ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.
47 ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
48 ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.
49 ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು
50 ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.
51 ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.
52 ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.
53 ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
54 ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”



